ಒಂದು ಪುಸ್ತಕ, ಒಂದು ನಮನ
ಡಾ| ಕಾಕುಂಜೆ ಗೋಪಾಲಕೃಷ್ಣ ಭಟ್ಟರ (ಕೆ.ಜಿ ಭಟ್) ಸಹಜ ಹಸನ್ಮುಖವನ್ನು ಹೊತ್ತ, ಹೊಳಪುಳ್ಳ ಉತ್ತಮ ಕಾಗದದ ನೂರಾ ಹದಿನಾರು ಪುಟಗಳ, ಅಸಂಖ್ಯ ಚಿತ್ರಗಳ ಪುಸ್ತಕ - ಟ್ಯಾಕ್ಸೋನೊಮಿ ಭಟ್ಟರ ಯಾನ. ನಿಜ ‘ಎಲೆಗಳ ಹಿಂದೆ’ ಬೀಳುವ ಗೀಳಿನ ಭಟ್ಟರ ವ್ಯಕ್ತಿತ್ವ ಸಾಮಾನ್ಯ ಲೋಕಮುಖಕ್ಕೆ, ಲೋಕೋಕ್ತಿಯಂತೆ ಎಲೆಯ ಮರೆಯಲ್ಲೇ ಉಳಿದಿತ್ತು. ಆ ಕೊರತೆಯನ್ನು ಕಿರಿದರಲ್ಲಿ ನೀಗಿಸುವ ಪ್ರಾಮಾಣಿಕ ಪ್ರಯತ್ನ ಈ ಪುಸ್ತಕ. ಗೋಪಾಲಕೃಷ್ಣ ಭಟ್ಟರು ಸ್ವಪ್ರಚಾರ ಬಿಡಿ, ಅವಶ್ಯವಿದ್ದಲ್ಲಿ ಯುಕ್ತ ಸ್ವಸ್ಥಾಪನೆಯನ್ನೂ ದೋಷ ಎನ್ನುವಂತೆಯೇ ನಿರಾಕರಿಸಿದ ನಿರ್ಮೋಹಿ. ಪುಸ್ತಕದ ಮುನ್ನುಡಿಕಾರ, ಪ್ರಕಾಶಕ - ಎನ್ ರಾಮನಾಥ್, ಒತ್ತು ಕೊಟ್ಟು







